Home Bibles ನಿರ್ಗಮಕಾಂಡ 3:18 · ಕನ್ನಡ ಬೈಬಲ್
ನಿರ್ಗಮಕಾಂಡ 3:18 · ಕನ್ನಡ ಬೈಬಲ್

ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.

Cross references

ಆದಿಕಾಂಡ 12:1

ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.

ಆದಿಕಾಂಡ 15:1

ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ಆದಿಕಾಂಡ 17:1

ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.

ಆದಿಕಾಂಡ 48:3

ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

ನಿರ್ಗಮಕಾಂಡ 3:12

ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

ನಿರ್ಗಮಕಾಂಡ 3:16

ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.

ನಿರ್ಗಮಕಾಂಡ 4:1

ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.

ನಿರ್ಗಮಕಾಂಡ 4:23

(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.

ನಿರ್ಗಮಕಾಂಡ 4:24

ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.

ನಿರ್ಗಮಕಾಂಡ 4:31

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ನಿರ್ಗಮಕಾಂಡ 5:1

ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.

ನಿರ್ಗಮಕಾಂಡ 5:3

ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.

ನಿರ್ಗಮಕಾಂಡ 7:16

ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.

ನಿರ್ಗಮಕಾಂಡ 8:23

ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.

ನಿರ್ಗಮಕಾಂಡ 8:25

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.

ನಿರ್ಗಮಕಾಂಡ 8:27

ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.

ನಿರ್ಗಮಕಾಂಡ 9:1

ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.

ನಿರ್ಗಮಕಾಂಡ 9:13

ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.

ನಿರ್ಗಮಕಾಂಡ 10:3

ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

ನಿರ್ಗಮಕಾಂಡ 10:24

ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.

ನಿರ್ಗಮಕಾಂಡ 13:17

ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.

ನಿರ್ಗಮಕಾಂಡ 19:1

ಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.

ನಿರ್ಗಮಕಾಂಡ 25:22

ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.

ನಿರ್ಗಮಕಾಂಡ 29:42

ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.

ನಿರ್ಗಮಕಾಂಡ 30:6

ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.

ನಿರ್ಗಮಕಾಂಡ 30:36

ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.

ಅಂಕೆಗಳ ಪುಸ್ತಕ 17:4

ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.

ಅಂಕೆಗಳ ಪುಸ್ತಕ 23:3

ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಂಕೆಗಳ ಪುಸ್ತಕ 23:15

ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.

ಯೆಹೋಶುವ 1:17

ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.

2 ದಿನವೃತ್ತಾಂತ 30:12

ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.

ಕೀರ್ತನೆಗಳು 110:3

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

ಯೆಶಾಯ 64:5

ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.

ಯೆರೆಮಿಯ 2:2

ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.

ಯೆರೆಮಿಯ 2:6

ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.

ಯೆರೆಮಿಯ 26:5

ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.

Interlinear

Choose Theme