ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Cross references
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.