ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
Cross references
ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.