ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
Cross references
ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.