ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
Cross references
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.