ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Cross references
ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.