Home Bibles ನಿರ್ಗಮಕಾಂಡ 32:11 · ಕನ್ನಡ ಬೈಬಲ್
ನಿರ್ಗಮಕಾಂಡ 32:11 · ಕನ್ನಡ ಬೈಬಲ್

ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?

Cross references

ಆದಿಕಾಂಡ 18:27

ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

ನಿರ್ಗಮಕಾಂಡ 6:6

ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

ನಿರ್ಗಮಕಾಂಡ 8:8

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ಅಂಕೆಗಳ ಪುಸ್ತಕ 11:11

ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?

ಅಂಕೆಗಳ ಪುಸ್ತಕ 14:13

ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!

ಅಂಕೆಗಳ ಪುಸ್ತಕ 16:22

ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.

ಅಂಕೆಗಳ ಪುಸ್ತಕ 21:7

ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.

ಅಂಕೆಗಳ ಪುಸ್ತಕ 27:4

ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.

ದ್ವಿತೀಯೋಪದೇಶಕಾಂಡ 9:18

ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.

ದ್ವಿತೀಯೋಪದೇಶಕಾಂಡ 9:26

ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.

ಕೀರ್ತನೆಗಳು 74:1

ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?

ಕೀರ್ತನೆಗಳು 106:23

ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.

ಯೆಶಾಯ 63:17

ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

ಯೆರೆಮಿಯ 15:1

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ದಾನಿಯೇಲ 9:15

ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

Interlinear

Choose Theme