ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
Cross references
ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.