ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
Cross references
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.