ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
Cross references
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.