ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
Cross references
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.