ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
Cross references
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.