ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.