ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
Cross references
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.