ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.