ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
Cross references
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?