ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
Cross references
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?