ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
Cross references
ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.