ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.