ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Cross references
ಇದಲ್ಲದೆ ಕರ್ತನು ಮೋಶೆಗೆ--
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.