ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
Cross references
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.