ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
Cross references
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --
ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ