Home Bibles ನಿರ್ಗಮಕಾಂಡ 4:11 · ಕನ್ನಡ ಬೈಬಲ್
ನಿರ್ಗಮಕಾಂಡ 4:11 · ಕನ್ನಡ ಬೈಬಲ್

ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

Cross references

ಆದಿಕಾಂಡ 18:14

ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.

ಕೀರ್ತನೆಗಳು 51:15

ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.

ಕೀರ್ತನೆಗಳು 94:9

ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?

ಕೀರ್ತನೆಗಳು 146:8

ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

ಸಾಮೇತಿಗಳು 20:12

ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

ಯೆಶಾಯ 6:7

ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.

ಯೆಶಾಯ 35:5

ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಯೆಶಾಯ 42:7

ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಯೆರೆಮಿಯ 1:6

ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.

ಯೆರೆಮಿಯ 1:9

ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.

ಯೆಹೆಜ್ಕೇಲ 3:26

ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

ಯೆಹೆಜ್ಕೇಲ 33:22

ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.

ಆಮೋಸ 3:6

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

ಮತ್ತಾಯ 11:5

ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

Interlinear

Choose Theme