ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
Cross references
ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.