Home Bibles ನಿರ್ಗಮಕಾಂಡ 4:21 · ಕನ್ನಡ ಬೈಬಲ್
ನಿರ್ಗಮಕಾಂಡ 4:21 · ಕನ್ನಡ ಬೈಬಲ್

ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.

Cross references

ಆದಿಕಾಂಡ 6:3

ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

ನಿರ್ಗಮಕಾಂಡ 3:19

ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

ನಿರ್ಗಮಕಾಂಡ 3:20

ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.

ನಿರ್ಗಮಕಾಂಡ 7:3

ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

ನಿರ್ಗಮಕಾಂಡ 7:13

ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

ನಿರ್ಗಮಕಾಂಡ 8:11

ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.

ನಿರ್ಗಮಕಾಂಡ 8:15

ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.

ನಿರ್ಗಮಕಾಂಡ 9:12

ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

ನಿರ್ಗಮಕಾಂಡ 9:35

ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.

ನಿರ್ಗಮಕಾಂಡ 10:20

ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸದೆ ಹೋದನು.

ನಿರ್ಗಮಕಾಂಡ 11:10

ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.

ನಿರ್ಗಮಕಾಂಡ 14:4

ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.

ನಿರ್ಗಮಕಾಂಡ 14:8

ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.

ನಿರ್ಗಮಕಾಂಡ 14:17

ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ದ್ವಿತೀಯೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ದ್ವಿತೀಯೋಪದೇಶಕಾಂಡ 2:36

ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

ಯೆಹೋಶುವ 11:20

ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

1 ಅರಸುಗಳು 22:22

ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.

ಕೀರ್ತನೆಗಳು 105:25

ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

ಯೆಶಾಯ 6:10

ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

ಯೆಶಾಯ 63:17

ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

ಯೋಹಾನ 12:40

ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

ರೋಮಾಪುರದವರಿಗೆ 1:28

ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

ರೋಮಾಪುರದವರಿಗೆ 9:18

ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

ರೋಮಾಪುರದವರಿಗೆ 11:8

(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

2 ಕೊರಿಂಥದವರಿಗೆ 2:16

ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

2 ತೆಸಲೋನಿಕದವರಿಗೆ 2:10

ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

1 ಪೇತ್ರ 2:8

ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

Interlinear

Choose Theme