ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--