ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
Cross references
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.