ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
Cross references
ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.