ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
Cross references
ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.