ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
Cross references
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;