ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
Cross references
ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.