ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
Cross references
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.