ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
Cross references
ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.