ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
Cross references
ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.