ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
Cross references
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.