ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Cross references
ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;