ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
Cross references
ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.