ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.