ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
Cross references
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.