ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
Cross references
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.