ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
Cross references
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.