ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ