ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
Cross references
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ