ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.