ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
Cross references
ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.