ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು.
ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.