ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.