ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
Cross references
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.