ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
Cross references
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.