ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
Cross references
ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
ಸರ, ಬಳೆ, ಮುಂಡಾಸ,
ಓಲೆ, ಉಂಗುರ, ಮೂಗುತಿ,
ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.